ಬೆಂಗಳೂರು: ರಾಜ್ಯದ ಜನರ ಕುಂದುಕೊರತೆ ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡಲು ಕರ್ನಾಟಕ ಸರ್ಕಾರ ಹೊಸ ಯೋಜನೆ ರೂಪಿಸಿದೆ. ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತಿ ತಿಂಗಳ ಎಲ್ಲಾ ಶನಿವಾರ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲು ಸರ್ಕಾರ ಅಧಿಕೃತ ಮಾರ್ಗಸೂಚಿ ಹೊರಡಿಸಿದೆ.
ಪಿಂಚಣಿ, ಪಹಣಿ ತಿದ್ದುಪಡಿ, ಪಡಿತರ ಚೀಟಿ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಈ ಸಭೆಗಳಲ್ಲಿ ನೇರವಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದು.
ನಿಮ್ಮ ಮನೆ ಬಾಗಿಲಿಗೇ ಬರಲಿದೆ ಸರ್ಕಾರ! ಪ್ರತಿ ಶನಿವಾರ ‘ಪ್ರಜಾಸೇವೆ ಆಂದೋಲನ’: ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕೆ ಹೊಸ ಪ್ಲಾನ್
ಪ್ರಜಾಸೇವೆ ಆಂದೋಲನ ಸಭೆಗಳ ವೇಳಾಪಟ್ಟಿ:
1ನೇ ಮತ್ತು 3ನೇ ಶನಿವಾರ: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲ್ಲೂಕು ಮಟ್ಟದ ಸಭೆಗಳು ನಡೆಯಲಿವೆ.
2ನೇ ಮತ್ತು 4ನೇ ಶನಿವಾರ: ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಸಭೆಗಳು ಆಯೋಜನೆಗೊಳ್ಳಲಿವೆ.
ವಿಶೇಷ ಸೂಚನೆ: ಸಭೆ ನಡೆಯುವ ದಿನಾಂಕಕ್ಕೂ 15 ದಿನಗಳ ಮುಂಚಿತವಾಗಿಯೇ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಪೂರ್ವ ಮುದ್ರಿತ ಅರ್ಜಿ ನಮೂನೆ ಹಾಗೂ ಲಕೋಟೆಗಳನ್ನು ತಲುಪಿಸಲಿದ್ದಾರೆ.
ಯಾವೆಲ್ಲಾ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ?
ಸಾರ್ವಜನಿಕರು ಕೆಳಗಿನ ವಿವಿಧ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಅರ್ಜಿ ಸಲ್ಲಿಸಬಹುದು:
ಪಿಂಚಣಿ ಯೋಜನೆಗಳು: ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಮಾಸಾಶನ ಇತ್ಯಾದಿ.
ಕಂದಾಯ ಇಲಾಖೆ: ಪಹಣಿ (RTC) ತಿದ್ದುಪಡಿ, ಖಾತೆ ಬದಲಾವಣೆ, ಪೋಡಿ ಸಮಸ್ಯೆಗಳು.
ಗ್ಯಾರಂಟಿ ಯೋಜನೆಗಳು: ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಸಮಸ್ಯೆಗಳು.
ಇತರ ಪ್ರಮುಖ ಸೇವೆಗಳು: ಹೊಸ ಪಡಿತರ ಚೀಟಿ, ವಸತಿ/ನಿವೇಶನ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಹಾಗೂ ಉದ್ಯೋಗ ಖಾತರಿ (MGNREGA) ಯೋಜನೆಗಳು.
ಸ್ಥಳದಲ್ಲೇ ಆನ್ಲೈನ್ ರಸೀದಿ & ಪರಿಶೀಲನೆ:
ಸಭೆಗಳಲ್ಲಿ ಇಲಾಖಾವಾರು ಅರ್ಜಿ ಸ್ವೀಕೃತಿ ಕೌಂಟರ್ಗಳು ಲಭ್ಯವಿರುತ್ತವೆ.
ಪ್ರತಿಯೊಂದು ಅರ್ಜಿಯನ್ನು ipgrs.karnataka.gov.in ಪೋರ್ಟಲ್ನಲ್ಲಿ ದಾಖಲಿಸಿ, ಆನ್ಲೈನ್ ಸ್ವೀಕೃತಿ ನೀಡಲಾಗುತ್ತದೆ.
ಸಾರ್ವಜನಿಕರು ತಮ್ಮ ಅರ್ಜಿಯ ನೈಜ ಸಮಯದ (Real-time) ಸ್ಥಿತಿಗತಿಯನ್ನು ಟ್ರ್ಯಾಕ್ ಮಾಡಬಹುದು.
ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವುದು ಕಡ್ಡಾಯವಾಗಿದ್ದು, ಮಾನ್ಯ ಮುಖ್ಯಮಂತ್ರಿಗಳೇ ಪ್ರತಿ ತಿಂಗಳು ಇದರ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಈ ಪುಟಗಳನ್ನು ಓದಿ……..
KEA Recruitment 2026: ತೋಟಗಾರಿಕೆ ಇಲಾಖೆಯಲ್ಲಿ 80 ಹುದ್ದೆಗಳ ನೇಮಕಾತಿ! ಅರ್ಜಿ ಸಲ್ಲಿಕೆ ಆರಂಭ, ಪೂರ್ಣ ವಿವರ ಇಲ್ಲಿದೆ
